ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ ರಾಜೀವಗೌಡ ಪರ ಪತ್ನಿ ಶರ್ಮಿಳಾ ಭರ್ಜರಿ ಮತಯಾಚನೆ ನಡೆಸಿದ್ದಾರೆ. ಪತಿಗೆ ಮತ ನೀಡುವ ಮೂಲಕ ಗೆಲ್ಲಿಸಬೇಕೆಂದು ಮನವಿ ಮಾಡುತ್ತಿದ್ದಾರೆ.
ಯಶವಂತಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಗಾರ್ಮೆಂಟ್ ಮಹಿಳೆಯರ ಬಳಿ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ದುಡಿಯುವ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮನೆಯೊಡತಿಗೆ ೨ ಸಾವಿರ ರೂ. ನೀಡುತ್ತಿದೆ ಎಂದರು.
ಇಷ್ಟು ಮಾತ್ರವಲ್ಲದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ೧ ಲಕ್ಷ ರೂಪಾಯಿವರೆಗೂ ಹಣ ನೀಡುವ ಭರವಸೆಯನ್ನೂ ನೀಡಿದೆ. ದುಡಿಯುವ ಮಹಿಳೆಯರ ಪರ ನಮ್ಮ ಪಕ್ಷ ಸದಾ ಇರಲಿದೆ. ಹೀಗಾಗಿ ಎಲ್ಲಾ ಮಹಿಳೆಯರು ಈ ಬಾರಿ ಉತ್ತರ ಬೆಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ಗೌಡ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು.