ಪ್ರಜಾಸ್ತ್ರ ಸುದ್ದಿ
ಧಾರವಾಡ: ಮಾಜಿ ಸಚಿವ ಹಾಗೂ ಧಾರವಾಡ -71ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರ ಮೇಲಿರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಈ ಕುರಿತು ಕ್ಷೇತ್ರದಲ್ಲಿ ಪರ ವಿರೋಧ ಚರ್ಚೆಗಳು ಜೋರಾಗಿವೆ.
ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಮ್ಮ ಮೇಲಿನ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ನೀಡಿದ್ದಾರೆ. ಇದರ ಪ್ರತಿ ಇಟ್ಟುಕೊಂಡು ಬಿಜೆಪಿ ಬೆಂಬಲಿಗರು ಹಾಗೂ ಇತರರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು ಸಹ ಇದಕ್ಕೆ ಕಾಮೆಂಟ್ ಮಾಡಿ ವಿನಯ್ ಕುಲಕರ್ಣಿ ಪರ ಬ್ಯಾಟ್ ಬೀಸಿದ್ದಾರೆ. ಮತದಾನಕ್ಕೆ ಕೇವಲ 2 ದಿನ ಬಾಕಿ ಇದೆ. ಈ ಎಲ್ಲ ಮೇಲಾಟಗಳಿಗೆ ಮೇ 13ರಂದು ಉತ್ತರ ಸಿಗಲಿದೆ.