ಜೆಪಿ ನಡ್ಡಾ ಸೇರಿ ಮೂವರ ವಿರುದ್ಧ ಕಾಂಗ್ರೆಸ್ ದೂರು

113

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋಮು ಪ್ರಚೋದನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಅಮಿತ್ ಮಾಳವಿಯಾ, ಅರುಣ್ ಸೂದ್ ವಿರುದ್ಧ ಕಾಂಗ್ರೆಸ್ ನಿಯೋಗ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಸಚಿವ ಪ್ರಿಯಾಂಕ್ ಖರ್ಗೆ, ವಕ್ತಾರ ರಮೇಶ್ ಬಾಬು, ಸೂರ್ಯಮುಕುಂದ ರಾಜ್ ಅವರ ನೇತೃತ್ವದಲ್ಲಿ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ. ಈ ವೇಳೆ ಮಾತನಾಡಿರುವ ಸಚಿವ ಖರ್ಗೆ, ಬಿಜೆಪಿಯ ಸುಳ್ಳು ಐಟಿ ಕಾರ್ಖಾನೆ ಬಂದ್ ಮಾಡುತ್ತೇವೆ. ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಕೋಮುವಾದ ಸೃಷ್ಟಿಸುವ ಸುಳ್ಳು ಪೋಸ್ಟ್ ಹಾಕುವ ಐಟಿ ಕಾರ್ಖಾನೆ ಬಂದ್ ಮಾಡುತ್ತೇವೆ ಎಂದರು.

ಏನಿದು ಘಟನೆ?

ಜೂನ್ 17 ಬಿಜೆಪಿ ಅಧಿಕೃತ ಖಾತೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹಾಕಿದ್ದ ಪೋಸ್ಟ್ ನಲ್ಲಿ, ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶ ಒಡೆಯುವ ಕೆಲಸದಲ್ಲಿ ಭಾಗಿಯಾಗುತ್ತಾರೆ ಅಂತಾ ಪೋಸ್ಟ್ ಮಾಡಲಾಗಿತ್ತು. ಇದರ ವಿರುದ್ಧ ಈಗ ದೂರು ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!