ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕಾಂಗ್ರೆಸ್ ವತಿಯಿಂದ ಬುಧವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿಯಾಗಿದ್ದಾರೆ. ಇದು ಹೊಸ ಚರ್ಚೆಗೆ ಕಾರಣವಾಗಿದೆ. ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್, ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್, ಎಂಎಲ್ಸಿ ಹೆಚ್.ವಿಶ್ವನಾಥ್ ಭಾಗಿಯಾಗಿದ್ದರು.
ಕ್ಷೇತ್ರದ ಅನುದಾನ ವಿಚಾರ ಸಂಬಂಧ ಸಿಎಂ ಭೇಟಿಯಾಗಲು ಆಗಮಿಸಿದ್ದರು ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿವೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು. ಶಾಸಕರನ್ನು ಕರೆದು ಮಾತನಾಡುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ವಿಜಯೇಂದ್ರ ಹೇಳಿದ್ದಾರೆ.
ಔತಣಕೂಟದ ವೇಳೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಲಹೆ ನೀಡಿದರು. ಗ್ಯಾರೆಂಟಿ ಯೋಜನೆಗಳ ಕುರಿತು ಜನರಲ್ಲಿ ಹೇಳಬೇಕು. ಫಲಾನುಭವಿಗಳನ್ನು ಒಂದೆಡೆ ಸೇರಿಸಿ ಚುನಾವಣೆಗೆ ಸಜ್ಜಾಗಬೇಕು ಎಂದಿದ್ದಾರೆ.