ಪ್ರಜಾಸ್ತ್ರ ಸುದ್ದಿ
ನವದೆಹಲಿ: ಭಾರತದ ವೈವಿಧ್ಯತೆಯನ್ನು ಹೇಳುವ ವೇಳೆ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ನೀಡಿದ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸ್ಪಷ್ಟಪಡಿಸಿದ್ದಾರೆ.
ಜನಾಂಗೀಕೆ ಹೇಳಿಕೆ ಸ್ವೀಕಾರರ್ಹವಲ್ಲ. ಹೀಗಾಗಿ ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಕಾಂಗ್ರೆಸ್ ಸಂಪೂರ್ಣವಾಗಿ ಅಂತರ ಕಾಯ್ದುಕೊಳ್ಳುತ್ತದೆ ಎಂದಿದ್ದಾರೆ.
ಪೂರ್ವ ಭಾರತದವರು ಚೀನಿಯರಂತೆ, ದಕ್ಷಿಣದವರು ಆಫ್ರಿಕನ್ನರಂತೆ, ಪಶ್ಚಿಮದವರು ಅರಬ್ಬರಂತೆ, ಉತ್ತರದವರು ಬಿಳಿಯರಂತೆ ಕಾಣಿಸುತ್ತಾರೆ. ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಮಾತ್ರ ಈ ರೀತಿ ನೋಡಲು ಸಾಧ್ಯ. ದೇಶದ ಜನತೆ ವಿವಿಧ ಭಾಷೆ, ಆಹಾರ, ಪದ್ಧತಿಯನ್ನು ಗೌರವಿಸುತ್ತಾರೆ. ಜಗತ್ತಿಗೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅದ್ಭುತ ಉದಾಹರಣೆ ಎಂದಿದ್ದಾರೆ.