ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ನನಗೆ ಬಳ್ಳಾರಿಗೆ ಹೋಗು ಎಂದು ಸಿದ್ದರಾಮಯ್ಯನವರು ಹೇಳಿಲ್ಲ. ಸ್ನೇಹಿತ ನಾಗರಾಜ ಛಬ್ಬಿ ನನ್ನನ್ನು ಬಳ್ಳಾರಿಗೆ ಕಳಿಸಿ ಎಂದು ಸಿದ್ದರಾಮಯ್ಯ ಬಳಿ ಕೇಳಿಕೊಂಡಿದ್ದಾರೆ. ಅದನ್ನು ಅವರು ನನಗೆ ಹೇಳಿದ್ದಾರೆ. ಆದರೆ, ನಾನು ಕಲಘಟಗಿ ಕ್ಷೇತ್ರ ಬಿಟ್ಟು ಎಲ್ಲೂ ಹೋಗಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008ರಲ್ಲಿ ಕಲಘಟಗಿಯಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು ನಾನು. ನಾಗರಾಜ ಛಬ್ಬಿ ಪ್ರತಿ ಚುನಾವಣೆಯಲ್ಲಿ ಕ್ಷೇತ್ರ ಹುಡುಕಾಟ ನಡೆಸುತ್ತಾರೆ. ಟಿಕೆಟ್ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಈ ಬಗ್ಗೆ ಪಕ್ಷದ ನಾಯಕರು ಬಗೆಹರಿಸಿದರೆ ಒಳ್ಳೆಯದು ಎಂದು ಸಂತೋಷ ಲಾಡ್ ಹೇಳಿದ್ದಾರೆ.