‘ಪ್ರತಾಪ್ ಸಿಂಹರಿಂದ ಮಿತಿ ಮೀರಿದ ಉದ್ದಟತನ’

319

ಪ್ರಜಾಸ್ತ್ರ ಸುದ್ದಿ

ಮೈಸೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ನೀಡುತ್ತಿರುವ ಹೇಳಿಕೆ ವಿರುದ್ಧ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರ ಬಗ್ಗೆ ಮಿತಿ ಮೀರಿದ ಉದ್ದಟತನವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದರು.

ಸಿದ್ದರಾಮಯ್ಯ ಅವರಿಗೆ ಆರ್ಥಿಕತೆ ಏನು ಗೊತ್ತು ಎಂದು ಪ್ರಶ್ನಿಸಿದ್ದಾರೆ. ರಾಜಕಾರಣದಲ್ಲಿರುವವರಿಗೆ ಸಾಮಾನ್ಯ ಜ್ಞಾನ ಇರಬೇಕು. ಆಡಳಿತ ನಡೆಸುವವರು ಲಂಡನ್ ಗೆ ಹೋಗಿ ಪದವಿ ಪಡೆದು ಬರಬೇಕಾ ಎಂದು ಪ್ರಶ್ನಿಸಿದರು. ವಿತ್ ಸಚಿವರಾಗಿ ಬಜೆಟ್ ಮಂಡಿಸಲು ಇಂತಹದ್ದೆ ಪದವಿ ಬೇಕೆಂದು ಏನಿಲ್ಲ. ಸಾಮಾನ್ಯ ಜ್ಞಾನವಿದ್ದರೆ ಒಳ್ಳೆಯ ಆಡಳಿತ ನೀಡಬಹುದು ಎಂದು ತಿರುಗೇಟು ನೀಡಿದರು.




Leave a Reply

Your email address will not be published. Required fields are marked *

error: Content is protected !!