ಬೆಂಗಳೂರು ಜಲಾವೃತಕ್ಕೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ

214

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಜಲಾವೃತಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಹಿಂದಿನ ಸರ್ಕಾರದ ವಿರುದ್ಧ ಆರೋಪಿಸಿದರು.

ಕೆರೆಗಳಲ್ಲಿ, ಕೆರೆ ಬಂಡ್ ಹಾಗೂ ಬಫರ್ ವಲಯಗಳಲ್ಲಿ ಎಗ್ಗಿಲ್ಲದೆ ಕಟ್ಟಡ ನಿರ್ಮಾಣಗಳಿಗೆ ಅನುಮತಿ ನೀಡಿದ್ದಾರೆ. ಇವತ್ತಿನ ಈ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ ಎಂದು ಸ್ವತಃ ಮುಖ್ಯಮಂತ್ರಿಗಳೇ ಹಿಂದಿನ ಸರ್ಕಾರದ ಕಡೆ ಬೊಟ್ಟು ಮಾಡಿದರು.

ಬೆಂಗಳೂರು ಸೃಷ್ಟಿಯಾದ ಅನಾಹುತ ನಿರ್ವಹಣೆ ಹಾಗೂ ಪರಿಹಾರಕ್ಕಾಗಿ 1,500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ನಿನ್ನೆ 300 ಕೋಟಿ ರೂಪಾಯಿಯ ಒತ್ತುವರಿ ತೆರವುಗೊಳಿಸಲು ಸೂಚಿಸಲಾಗಿದೆ. ಇನ್ನು ಮುಂದೆ ಒತ್ತುವರಿಗೂ ಅವಕಾಶವಿಲ್ಲದೆ, ನೀರಿನ ಹರಿವೆಗೆ ಸಮಸ್ಯೆಯಿಲ್ಲದಂತೆ ವ್ಯವಸ್ಥೆ ಮಾಡಲಾಗುವುದು ಎಂದರು.




Leave a Reply

Your email address will not be published. Required fields are marked *

error: Content is protected !!