ಪ್ರಜಾಸ್ತ್ರ ಸುದ್ದಿ
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಮಾಡಿದ ಕುತಂತ್ರದ ರೀತಿಯಲ್ಲಿ ಇಲ್ಲಿಯೂ ನನ್ನನ್ನು ಕಾಂಗ್ರೆಸ್ ನವರು ಸೋಲಿಸಿದ್ದಾರೆ ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಮತದಾನದ ಹಿಂದಿನ ರಾತ್ರಿ 3 ಸಾವಿರ ರೂಪಾಯಿ ಕೋಪನ್ ಕಾರ್ಡ್ ಕೊಟ್ಟಿದ್ದಾರೆ. ಇಂದು ಸಹ ನನ್ನನ್ನು ಕುತಂತ್ರದ ಮೂಲಕ ಸೋಲಿಸಿದ್ದಾರೆ. ರಾಮನಗರದ ಜನತೆಗೆ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದೀರಿ. ನಾನು, ನನ್ನ ಕುಟುಂಬ ನಿಮ್ಮ ಜೊತೆ ಇರುತ್ತೆ ಎಂದರು.
ಇನ್ನು ಮುಂದಿನ ಲೋಕಸಭಾ ಚುನಾವಣೆ ಆಗಲಿ, 2028ರ ವಿಧಾನಸಭಾ ಚುನಾವಣೆ ಬಗ್ಗೆ ಆಗಲಿ ನಾನು ತೀರ್ಮಾನ ತೆಗೆದುಕೊಳ್ಳುವುದಿಲ್ಲ. 2028ರಲ್ಲಿ ರಾಮನಗರದಲ್ಲಿ ನನಗಿಂತ ಪ್ರಬಲ ಅಭ್ಯರ್ಥಿ ಬಂದರೆ ಕಾರ್ಯಕರ್ತರ ಜೊತೆಗೆ ಚರ್ಚಿಸುತ್ತೇನೆ ಅಂತಾ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.