ಪ್ರಜಾಸ್ತ್ರ ಸುದ್ದಿ
ಹಾವೇರಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶಿಕಾರಿಪುರದಿಂದ ನಾನು ಸ್ಪರ್ಧಿಸುವುದಿಲ್ಲ. ಮಗ ಸ್ಪರ್ಧಿಸುತ್ತೇನೆ ಎಂದು ಶುಕ್ರವಾರ ಹೇಳುವ ಮೂಲಕ, ಈಗಾಗ್ಲೇ ಟಿಕೆಟ್ ಫೈನಲ್ ಆಗಿದೆ ಅನ್ನೋ ರೀತಿ ಘೋಷಿಸಿದ್ದಾರೆ. ಇದ್ದರು ಇರಬಹುದು. ಇದರ ನಡುವೆ ಕಾಂಗ್ರೆಸ್ ನಾಯಕ ಕೆ.ಬಿ ಕೋಳಿವಾಡ ಮಗನಿಗೆ ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ನಾನು ಮುಂಬರುವ ಚುನಾವಣಾ ಕಣದಿಂದ ಹಿಂದೆ ಸರಿದು ಮಗನ ಬಿಟ್ಟುಕೊಡುತ್ತೇನೆ ಎಂದಿದ್ದಾರೆ. ಅಲ್ಲದೇ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಅಲ್ಲದೇ, ಹೈಕಾಂಡ್ ಬಯಸಿದರೆ ರಾಜ್ಯಸಭೆ ಅಥವ ಲೋಕಸಭೆಗೆ ಸ್ಪರ್ಧಿಸುವುದಾಗಿ ಮಾಜಿ ಸ್ಪೀಕರ್ ಕೋಳಿವಾಡ ಹೇಳಿದ್ದಾರೆ.