ವಿಜಯಪುರ: ಸ್ಥಳೀಯ ಕಾಂಗ್ರೆಸ್ ನಾಯಕಿ ಹಾಗೂ ಜೆಡಿಎಸ್ ನ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ್ ಶವ, ಕೋಲ್ಹಾರ ತಾಲೂಕಿನ ಕೋಲ್ಹಾರ ಸೇತುವೆ ಬಳಿ ಪತ್ತೆಯಾಗಿದೆ. ರೇಷ್ಮಾ ಪಡೇಕನೂರ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬೀಸಾಕಿರಬಹುದು ಅಂತಾ ಹೇಳಲಾಗ್ತಿದೆ.
ನಿನ್ನೆ ರಾತ್ರಿ ನೆರೆಯ ಮಹಾರಾಷ್ಟ್ರದ ಎಂಐಎಂ ಮುಖಂಡರೊಬ್ಬರೊಂದಿಗೆ ಕಾರಿನಲ್ಲಿ ತೆರಳಿದ್ದರು ಅನ್ನೋ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕೋಲ್ಹಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇನ್ನು ಈ ಮೊದಲು ಜೆಡಿಎಸ್ ನಲ್ಲಿದ್ದ ರೇಷ್ಮಾ ಪಡೇಕನೂರ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಅವರಿಗೆ ಟಿಕೇಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಜಿಲ್ಲೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕಾಂಗ್ರೆಸ್ ನಾಯಕಿಯ ಶವ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.