ಸಿಎಂ ಸ್ಥಾನದ ಚರ್ಚೆ ದೆಹಲಿಗೆ ಸಿದ್ದರಾಮಯ್ಯ

105

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶನ ಮಾಡಿ ರಾಜ್ಯ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದರು. ಮೊದಲಿನಿಂದಲೂ ಸಿಎಂ ಗಾದಿಯ ಮೇಲೆ ಇಬ್ಬರು ಕಣ್ಣಿಟ್ಟಿದ್ದು ಈಗ ಯಾರಿಗೆ ಆ ಸ್ಥಾನ ಅನ್ನೋ ಚರ್ಚೆ ನಡೆಯುತ್ತಲೇ ಇದೆ.

ಸಿದ್ದರಾಮಯ್ಯ ಇಂದು ಮಧ್ಯಾಹ್ನ ಒಬ್ಬರೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಚರ್ಚೆ ನಡೆಯಲಿದೆ. ಈ ವೇಳೆ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ವಕ್ತಾರ ರಣದೀಪ್ ಸುರ್ಜೇವಾಲ್ ಸೇರಿ ವರಿಷ್ಠರ ಜೊತೆ ಚರ್ಚೆ ನಡೆಸಲಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ನಾನು ದೆಹಲಿಗೆ ಹೋಗಬೇಕು. ಹೋಗುತ್ತೇನೋ ಇಲ್ಲವೋ ಅನ್ನೋದು ಇನ್ನು ತೀರ್ಮಾನವಾಗಿಲ್ಲ. ಇಂದು ನನ್ನ ಜನ್ಮ ದಿನ. ಮನೆಯಲ್ಲಿ ಪೂಜೆಗಳಿವೆ. ಪಕ್ಷದ ಸಂಪ್ರದಾಯದಂತೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತೆ. ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ ಎಂದರು.




Leave a Reply

Your email address will not be published. Required fields are marked *

error: Content is protected !!