ಪ್ರಜಾಸ್ತ್ರ ಅಪರಾಧ ಸುದ್ದಿ
ಕಲಬುರಗಿ: ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಂದ್ರಶೇಖರ್ ಚೌಲ್ ಕೊಲೆಯಾದ ಯುವಕ. ಈತ ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಎಂಬುವರ ಮಗನೆಂದು ತಿಳಿದು ಬಂದಿದೆ.
ಆಳಂದ ಪಟ್ಟಣದ ಜಿಡಗಾ ರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸ್ನೇಹಿತರೆ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ. ಆಳಂದ ಶಾಸಕ ಬಿ.ಆರ್ ಪಾಟೀಲ ಆಪ್ತನಾಗಿರುವ ಬಸವರಾಜ್ ಚೌಲ್ ಪುತ್ರನೇ ಕೊಲೆಯಾದ ದುರ್ದೈವಿ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ.