ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ್ ನಾಯಕರು ಸಹಕರಿಸಲಿ

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೇಕೆದಾಟು ಯೋಜನೆಯ ವಿಚಾರ ಕೋರ್ಟ್ ನಲ್ಲಿದೆ. ಇದರಲ್ಲಿ ಕಾಂಗ್ರೆಸ್ ನವರು ಹಠ ಬಿಡಬೇಕು. ಅವರು ಸರ್ಕಾರ ನಡೆಸಿದವರು. ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ್ ನಾಯಕರು ಸಹಕರಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಅನಾರೋಗ್ಯ ಬಂದ ಮೇಲೆ ಸಮಸ್ಯೆ ಎದುರಿಸುವುದಕ್ಕಿಂತ ಬರದಂತೆ ನೋಡಿಕೊಳ್ಳುವುದು ಉತ್ತಮ. ಕಾಂಗ್ರೆಸ್ ಪಾದಯಾತ್ರೆ ರಾಜಕೀಯದಿಂದ ಕೂಡಿದೆ. ಇಂತಹ ಸಂದರ್ಭದಲ್ಲಿಯೂ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದರು. ಇನ್ನು ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವೇಳೆ ಪೊಲೀಸರು ಸಹನೆಯಿಂದ ನಡೆದುಕೊಳ್ಳಬೇಕು ಎಂದು ತಮ್ಮ ಇಲಾಖೆಯವರಿಗೆ ಕಿವಿ ಮಾತು ಹೇಳಿದರು.




Leave a Reply

Your email address will not be published. Required fields are marked *

error: Content is protected !!