ಬಿಜೆಪಿ ಪರ ಕೆಲಸ: ಕೈ ನಾಯಕರ ಉಚ್ಛಾಟನೆ

332

ಬೆಂಗಳೂರು: ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಸರವಣ ಪರವಾಗಿ ಕೆಲಸ ಮಾಡುವ ಮೂಲಕ, ಪಕ್ಷ ವಿರೋಧಿ ಚಟುವಟಿಕೆ ಕೆಲಸ ಮಾಡಿದ ಆರೋಪದ ಮೇಲೆ ಮೂವರು ಕಾಂಗ್ರೆಸ್ ಲೀಡರ್ ಗಳನ್ನ ಉಚ್ಛಾಟನೆ ಮಾಡಲಾಗಿದೆ.

ಬಿಬಿಎಂಪಿಯ ರಾಮಸ್ವಾಮಿಪಾಳ್ಯದ ಸದಸ್ಯೆ ನೇತ್ರಾವತಿ ಕೃಷ್ಣೇಗೌಡ, ಸಂಪಂಗಿನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೃಷ್ಣೇಗೌಡ ಹಾಗೂ ಜಯಮಹಲ ವಾರ್ಡ್ ಸದಸ್ಯ ಎಂ.ಕೆ ಗುಣಶೇಖರ ಅವರನ್ನ ಉಚ್ಛಾಟನೆ ಮಾಡಲಾಗಿದೆ. ಈ ಮೂವರು ನಾಯಕರು, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ ಅರ್ಷದ ಪರ ಕೆಲಸ ಮಾಡದೆ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ದೂರ ಬಂದಿದೆ. ಆದ್ರಿಂದ ಅವರನ್ನ ಉಚ್ಛಾಟನೆ ಮಾಡಲಾಗಿದೆ ಅಂತಾ ಕಾಂಗ್ರೆಸ್ ಹೇಳಿದೆ.

ಬಿಜೆಪಿಯಿಂದ ಎಂ.ಸರವಣ, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ ಹಾಗೂ ಜೆಡಿಎಸ್ ನಿಂದ ತನ್ವೀರ ಅಹ್ಮದ ಅಭ್ಯರ್ಥಿಯಾಗಿದ್ದಾರೆ. ಡಿಸೆಂಬರ್ 5ರಂದು ಮತದಾನ ನಡೆಯುತ್ತಿದ್ದು, ಡಿಸೆಂಬರ್ 9ರಂದು ರಿಲಿಸ್ಟ್ ಬರ್ತಿದೆ.




Leave a Reply

Your email address will not be published. Required fields are marked *

error: Content is protected !!