ಪ್ರಜಾಸ್ತ್ರ ಸುದ್ದಿ
ವಿಜಯನಗರ: ಪ್ರಧಾನಿ ಮೋದಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಶಾಸಕ ಪಿ.ಟಿ ಪರಮೇಶ್ವರ ನಾಯ್ಕ ಕ್ಷಮೆ ಕೇಳಿದ್ದಾರೆ. ವಿಡಿಯೋ ಮೂಲಕ ಮಾತನಾಡಿರುವ ಶಾಸಕರು ಬೇಷರತ್ತು ಕ್ಷಮೆ ಕೇಳಿದ್ದಾರೆ.
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ರೈತರ ಕಣ್ಣೀರು ನನ್ನನ್ನು ಉದ್ವೇಗಕ್ಕೆ ಒಳಗಾಗುವಂತೆ ಮಾಡಿತ್ತು. ಪ್ರಧಾನಿಯವರ ಬಗ್ಗೆ ನಾನು ಬಳಸಿದ ಅವಹೇಳನ ಪದಗಳಿಗೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.