ಪ್ರಜಾಸ್ತ್ರ ಸುದ್ದಿ
ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಧಾರವಾಡಕ್ಕೆ ಬಂದು ಮತ ಚಲಾಯಿಸಿದ್ದಾರೆ. ಹೈಕೋರ್ಟ್ ಅನುಮತಿ ನೀಡಿದ್ದರಿಂದಾಗಿ ಇಂದು ತವರು ಜಿಲ್ಲೆಗೆ ಬಂದು ಮತ ಚಲಾಯಿಸಿದರು.
ಸಪ್ತಾಪುರದಲ್ಲಿರುವ ಶಾರದಾ ಹೈಸ್ಕೂಲ್ ನಲ್ಲಿರುವ ಮತಗಟ್ಟೆಗೆ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಆದರೂ, ಈ ವೇಳೆ ಅವರಿಗೆ ಧಾರವಾಡ ಪ್ರವೇಶಕ್ಕೆ ನಿರಾಕರಿಸಲಾಗಿತ್ತು. ಹೀಗಾಗಿ ಪತ್ನಿ, ಕುಟುಂಬಸ್ಥರು, ಬೆಂಬಲಿಗರು ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬಂದಿದ್ದಾರೆ.