ಪ್ರಜಾಸ್ತ್ರ ಸುದ್ದಿ
ತುಮಕೂರು: ಸಚಿವರ ವಿರುದ್ಧ ಸ್ವಪಕ್ಷೀಯ ಶಾಸಕರು ಅಸಮಧಾನ ವ್ಯಕ್ತಪಡಿಸಿದ್ದು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಯಿತು. ಹೀಗಾಗಿ ಗುರುವಾರ ಸಂಜೆ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಸಹಿ ಮಾಡಿದ ಶಾಸಕರ ವಿರುದ್ಧ ಕಿಡಿ ಕಾರಿದ್ದಾರಂತೆ. ಮೌಖಿಕವಾಗಿ ಹೇಳಿದ್ದರೆ ಸಭೆ ಕರೆಯುತ್ತಿದ್ದೆ. ಪತ್ರ ಬರೆದು ಸಹಿ ಮಾಡುವ ಅಭಿಯಾನ ಮಾಡುವ ಸಂಪ್ರದಾಯ ಬೇಡವೆಂದು ಎಚ್ಚರಿಕೆ ನೀಡಿದ್ದಾರಂತೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಶುಕ್ರವಾರ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ನಡುವೆ ಹೊಂದಾಣಿಕೆ ಇರಬೇಕು. ಜಿಲ್ಲಾ ಶಾಸಕರು ಹಾಗೂ ಉಸ್ತುವಾರಿ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಮಾತನಾಡಲಿದ್ದಾರಂತೆ. ಶಾಸಕ ಬಿ.ಆರ್ ಪಾಟೀಲ ರಾಜೀನಾಮೆ ನೀಡುತ್ತಾರೆ ಅನ್ನೋದು ಸುಳ್ಳು. ಪತ್ರ ಬರೆದಿದ್ದು ತಪ್ಪಾ ಆಗಿದೆ ಎಂದು ಕ್ಷಮೆ ಕೇಳಿದ್ದಾರೆ ಅಂತಾ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.