ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪರನ್ನ ಕೆಳಗಿ ಇಳಿಸಿ ಆ ಸ್ಥಾನದಲ್ಲಿ ಕೂರಲು ಬಿಜೆಪಿ ನಾಯಕರ ನಡುವೆ ಕಾಳಗ ನಡೆದಿದೆ. ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಬಗ್ಗೆ ಜಟಾಪಟಿ ಶುರುವಾಗಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಅವರ ಆಪ್ತ ಶಾಸಕರು ಬಹಿರಂಗವಾಗಿ ಹೇಳಿಕೆ ಕೊಡ್ತಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸೇರಿದಂತೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಶಾಸಕರ ಹೇಳಿಕೆಗೂ ನನಗೂ ಸಂಬಂಧವಿಲ್ಲ ಎಂದಿದ್ದಾರೆ.
ಶಾಸಕರು ಹೇಳಿಕೆ ನೀಡಿದರೆ ನಾನೇನೂ ಮಾಡಕ್ಕಗಲ್ಲ. ಅದಕ್ಕೂ ನನಗೂ ಸಂಬಂಧವಿಲ್ಲ ಅಂತಾ ಹೇಳಿದ್ದಾರೆ. ಇದರ ನಡುವೆ ಹೈಕಾಂಡ್ ದೆಹಲಿಗೆ ಬರಲು ಸಿದ್ಧರಾಮಯ್ಯಗೆ ಸೂಚನೆ ನೀಡಿದ್ದಾರೆ ಎನ್ನಲಾಗ್ತಿದೆ.