ಪ್ರಜಾಸ್ತ್ರ ಸುದ್ದಿ
ಬೆಳಗಾವಿ: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸಿದ್ದು, ಬುಧವಾರ ಕುಂದಾನಗರಿಯಿಂದ ಪ್ರಜಾಧ್ವನಿ ಬಸ್ ಯಾತ್ರೆ ಪ್ರಾರಂಭಿಸಿದೆ. ನವ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಯಾತ್ರೆ ಆರಂಭಿಸಲಾಗಿದೆ.
ವೀರಸೌಧದಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸುವ ಮೂಲಕ ಯಾತ್ರೆ ಪ್ರಾರಂಭಿಸಲಾಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಬೇರೆ ಬೇರೆ ಪಕ್ಷಕ್ಕೆ ಹೋದವರು ವಾಪಸ್ ಬರಬಹುದು. ಅವರಿಗೆ ಉತ್ತಮ ಸ್ಥಾನ ನೀಡಲಾಗುತ್ತೆ. ಈ ಬಾರಿ ಕಾಂಗ್ರೆಸ್ ಬಂದೇ ಬರುತ್ತೆ. ಬಿಜೆಪಿ ಸೋಲುತ್ತೆ. ಹೀಗಾಗಿ ಗೆಲ್ಲುವ ಪಕ್ಷದೊಂದಿಗೆ ಇರಿ ಎಂದರು.
ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಎಂಎಲ್ಸಿ ಸಲೀಂ ಅಹ್ಮದ್, ಮಾಜಿ ಸಚಿವ ಎಚ್.ಕೆ ಪಾಟೀಲ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.