ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಕನಕಪುರದಿಂದ ಬೆಂಗಳೂರು ವರೆಗೂ ಪಾದಯಾತ್ರೆ ನಡೆಸುತ್ತಿದೆ. ಕೋವಿಡ್ ಸಂದರ್ಭದಲ್ಲಿ ಬೃಹತ್ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಚಾಟಿ ಬೀಸಿದೆ.
ಇದೀಗ ಬಿಬಿಎಂಪಿ ಅನುಮತಿ ನಿಡಿದ್ದ ಸಮಾವೇಶಯನ್ನು ರದ್ದು ಮಾಡಲಾಗಿದೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನವರಿ 18ರಂದು ಸಮಾವೇಶ ನಡೆಸಲು ಪ್ಲಾನ್ ಆಗಿತ್ತು. ಅದಕ್ಕೆ ಬಿಬಿಎಂಪಿಯೂ ಅನುಮತಿ ನೀಡಿತ್ತು. ಇದೀಗ ಅದನ್ನು ರದ್ದು ಮಾಡಲಾಗಿದೆ.