ವಿಜಯಪುರ: ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್ ಮೇಲೆ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಮಾಧ್ಯಮದೊಂದಿಗೆ ಮಾತ್ನಾಡಿದ ಅವರು, 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಅಂತಾ ಆರೋಪಿಸಿದ್ದಾರೆ.
15 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುತ್ತೆ ಎಂದು ಹೇಳಿಲ್ಲ. 12 ಹೇಳಿದ್ದೇನೆ. 15 ಗೆದ್ದರೂ ಆಶ್ಚರ್ಯವಿಲ್ಲವೆಂದರು. ಜೆಡಿಎಸ್ ಸಹ ಒಂದು ಪಕ್ಷ. ಅವರೂ 15 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿ ಅಂತಾ ಹೇಳಿದ್ರು. ಅಲ್ದೇ ಅನರ್ಹ ಶಾಸಕರ ತೀರ್ಪು ಬದ್ಮೇಲೆ ಉಳಿದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತೆ ಅಂತಾ ಹೇಳಿದ್ರು.
ವಿಜಯಪುರ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ರಾಜ್ಯಾದ್ಯಂತ ಸಮಾವೇಶ ಹಾಗೂ ಪ್ರತಿಭಟನೆ ನಡೆಸಲಾಗ್ತಿದೆ. ಇಂದು ವಿಜಯಪುರದಲ್ಲಿ ನಡೆಯುತ್ತಿದ್ದು, ಇದರಲ್ಲಿ ಭಾಗವಹಿಲು ಬಂದಿರುವ ಅವರು ಈ ರೀತಿ ಹೇಳಿದ್ದಾರೆ.