ಪ್ರಜಾಸ್ತ್ರ ಸುದ್ದಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೇಶವ್ಯಾಪಿ ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ನಾಯಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಕಾರ್ಯಕರ್ತರ ಮೇಲೂ ಲಾಠಿ, ಬೂಟು ಏಟು ನೀಡುತ್ತಿದ್ದಾರೆ. ಪೊಲೀಸರ ವರ್ತನೆಗೆ ಎಲ್ಲಡೆಯಿಂದ ಖಂಡನೆ ವ್ಯಕ್ತವಾಗಿದೆ. ಮಹಿಳಾ ಸಂಸದರನ್ನು, ನಾಯಕಿಯರನ್ನು, ಯುವ ಘಟಕದ ಅಧ್ಯಕ್ಷರನ್ನು ಸಹ ರಸ್ತೆಯ ಮೇಲೆ ಎಳೆದಾಡಿ ಒದ್ದೆರುವ ವಿಡಿಯೋ ವರೈಲ್ ಆಗಿದೆ.
ಪೊಲೀಸ್ ವ್ಯಾನ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಾಂತಿ ಮಾಡಿಕೊಳ್ಳುವಷ್ಟರ ಮಟ್ಟಿಗೆ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರ ವಿಡಿಯೋ ಟ್ವೀಟರ್ ನಲ್ಲಿ ಶೇರ್ ಮಾಡುವ ಮೂಲಕ ಸರ್ವಕಾಧಿಕಾರಿತನ ಮೆರೆಯಲಾಗುತ್ತಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.