ದೇಶಕ್ಕಾಗಿ ಗಾಂಧಿ ಕುಟುಂಬ ಗುಲಾಮರಂತೆ ಕೆಲಸ ಮಾಡಿದೆ: ಡಿಕೆಶಿ

152

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ನಗರದಲ್ಲಿ ಮೌನ ಪ್ರತಿಭಟನೆ ನಡೆಸಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ದೇಶಕ್ಕಾಗಿ ಗಾಂಧಿ ಕುಟುಂಬ ಗುಲಾಮರಂತೆ ಕೆಲಸ ಮಾಡಿದೆ. ಹೀಗಾಗಿ ನಾವು ಅವರ ಕುಟುಂಬಕ್ಕಾಗಿ ಗುಲಾಮರಂತೆ ಕೆಲಸ ಮಾಡುತ್ತೇವೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.

ಬಿಜೆಪಿಯವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಆದರೆ, ಗಾಂಧಿ ಕುಟುಂಬ ಜೈಲು ಶಿಕ್ಷೆ ಅನುಭವಿಸಿದೆ. ಸೋನಿಯಾ ಗಾಂಧಿ ನಮ್ಮ ತಾಯಿ. ರಾಹುಲ್ ಗಾಂಧಿ ನಮ್ಮ ಸಹೋದರ. ನಾನು, ಪಿ.ಚಿದಂಬರಂ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಜೈಲಿಗೆ ಕಳಿಸಲಾಯಿತು. ಹೀಗೆ ದ್ವೇಷ ರಾಜಕಾರಣದ ಮೂಲಕ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿ, ಪ್ರಿಯಾಂಕ್ ಖರ್ಗೆ, ಸಲೀಂ ಪಟೇಲ್, ಯು.ಟಿ ಖಾದರ್ ಸೇರಿ ಹಲವು ಮುಖಂಡರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!