ರಾಜ್ಯ ಸರ್ಕಾರದ ವಿರುದ್ಧ ಕೈ ಪ್ರತಿಭಟನೆ

302

ಬೆಂಗಳೂರು: ಪ್ರವಾಹ ಪರಿಸ್ಥಿತಿಯನ್ನ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಅಂತಾ ಆರೋಪಿಸಿ ಕಾಂಗ್ರೆಸ್, ವಿಧಾನಸೌಧ ಮತ್ತು ವಿಕಾಸಸೌಧ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುತ್ತಿದೆ.

ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ, ಕಾರ್ಯದರ್ಶಿ ಈಶ್ವರ ಖಂಡ್ರೆ, ಕೆ.ಜಿ ಜಾರ್ಜ್, ಕೃಷ್ಣಬೈರೇಗೌಡ, ವಿ.ಎಸ್ ಉಗ್ರಪ್ಪ, ಆರ್.ವಿ ದೇಶಪಾಂಡೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡು ಸೇರಿಕೊಂಡು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗ್ತಿದೆ.

ರಾಜ್ಯಕ್ಕೆ ಪರಿಹಾರ ತರುವಲ್ಲಿ ಸರ್ಕಾರ ವಿಫಲವಾಗಿದೆ. ಕೇಂದ್ರವೂ ಇದನ್ನ ವಿಪತ್ತು ಎಂದು ಪರಿಗಣಿಸಿ. ಇದುವರೆಗೂ ಯಾವುದೇ ರೀತಿಯಲ್ಲಿ ಪರಿಹಾರ ಬಿಡುಗಡೆ ಮಾಡಿಲ್ಲ. ಇದ್ರಿಂದಾಗಿ ಉತ್ತರ ಕರ್ನಾಟಕ ಭಾಗದ ಜನಕ್ಕೆ ಸಾಕಷ್ಟು ಅನ್ಯಾಯವಾಗಿದೆ ಅಂತಾ ಹೇಳಿ ಪ್ರತಿಭಟನೆ ನಡೆಸಲಾಗ್ತಿದೆ. ಇದರ ಜೊತೆಗೆ ಆದಷ್ಟು ಬೇಗ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ.




Leave a Reply

Your email address will not be published. Required fields are marked *

error: Content is protected !!