ಬಿಜೆಪಿಯಿಂದ ದ್ವೇಷ ರಾಜಕಾರಣ: ಶಿವಕಾಂತಮ್ಮ ನಾಯಕ

240

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕೇಂದ್ರ ಬಿಜೆಪಿ ಸರ್ಕಾರ ಇಡಿ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿ ಜಿಲ್ಲೆಯ ಚಡಚಣದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಮ್ಮ ನಾಯಕರಿಗೆ ವಿನಾಃಕಾರಣ ಕಿರುಕುಳ ನೀಡಲಾಗುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದ್ವೇಷ ರಾಜಕಾರಣ ಮಾಡುತ್ತಿದೆ ಅಂತಾ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿವಕಾಂತಮ್ಮ ನಾಯಕ ವಾಗ್ದಾಳಿ ನಡೆಸಿದರು. ಪ್ರತಿಭಟನೆ ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಡಿ ಹಕ್ಕೆ, ನಾಗಠಾಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಹಾಜಹಾನ ಮುಲ್ಲಾ, ಮಾಜಿ ಪಟ್ಟಣ ಪಂಚಾಯ್ತಿ ಸದಸ್ಯ ಮೀರಾಸಾಬ ಅತ್ತರ, ಶಬ್ಬೀರ ನದಾಫ, ಮೈಬು ಸೌದಗರ, ಮಹಾದೇವ ಹಿರೇಕುರುಬರ, ಶೀಲವಂತ ಅಡಕಿ, ಶ್ರೀಶೈಲ ಕೋಳಿ, ಮಲ್ಲು ಪೂಜಾರಿ, ಸತೀಶ ಊಟಗಿ ಸೇರಿ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!