ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

189

ಪ್ರಜಾಸ್ತ್ರ ಸುದ್ದಿ

ಮೈಸೂರು: ದಲಿತರ ಬಗ್ಗೆ ಅವಹೇಳನಕಾರಿಯಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ ಎಂದು ಹೇಳಿ ಬಿಜೆಪಿ ರಾಜ್ಯದ ವಿವಿಧ ಕಡೆ ಪ್ರತಿಭಟನೆ ನಡೆಸಿತು. ಸ್ವಾರ್ಥಕ್ಕಾಗಿ ದಲಿತ ಮುಖಂಡರು ಬಿಜೆಪಿ ಸೇರಿದ್ದಾರೆ ಅನ್ನೋ ಹೇಳಿಕೆ ತಿರುಚಿ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಪುರಭವನ ಮುಂದಿನ ಅಂಬೇಡ್ಕರ್ ಪ್ರತಿಮೆ ಎದುರು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಕಳಲೆ ಕೇಶವಮೂರ್ತಿ, ಮಂಜುಳಾ ಮಾನಸಾ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದರು.

ದಲಿತರ ಏಳಿಗಾಗಿ ಸಿದ್ದರಾಮಯ್ಯ ಅನೇಕ ಯೋಜನೆಗಳನ್ನು ತಂದಿದ್ದಾರೆ. ಅವರ ಬಗ್ಗೆ ಗೌರವ ಇದೆ. ದಲಿತರ ನಡುವೆ ಒಡಕು ಮೂಡಿಸಲು ಬಿಜೆಪಿ ಸುಳ್ಳಿನ ಪ್ರಚಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.




Leave a Reply

Your email address will not be published. Required fields are marked *

error: Content is protected !!