ಸಿಎಂ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

244

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ ಮೇಲೆ ಪೊಲೀಸ್ ದೌರ್ಜನ್ಯವೆಸಗಲಾಗಿದೆ ಎಂದು ಹೇಳ್ತಿರುವ ಪ್ರಕರಣ ಸಂಬಂಧ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ, ಖರ್ಗೆ ಸೇರಿದಂತೆ ಕೈ ನಾಯಕರು ಹೋರಾಟಕ್ಕೆ ಸಜ್ಜಾಗಿದ್ದಾರೆ.

ಶಿವಮೊಗ್ಗ ಚಲೋ ಎಂದಿರುವ ಕಾಂಗ್ರೆಸ್ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಿಂದ ಶಿವಮೊಗ್ಗ ಸೈನ್ಸ್ ಮೈದಾನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಸುಮಾರು 20 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರಂತೆ.

ಫೆಬ್ರವರಿ 28ರಂದು ಕನಕ ಮಂಟಪದಲ್ಲಿ ನಡೆದ ಕಬಡ್ಡಿ ಪಂದ್ಯದ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಈ ವೇಳೆ ಶಾಸಕ ಸಂಗಮೇಶ ಹಾಗೂ ಪುತ್ರನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಶಾಸಕರಿಗೆ ಜಾಮೀನು ನೀಡಲಾಗಿದ್ದು, ಪುತ್ರ ಬಸವೇಶ ಬಂಧನದಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!