ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

199

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದ ಅಂಬೇಡ್ಕರ ವೃತ್ತದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಜಿಲ್ಲಾ ಘಟಕದ ವತಿಯಿಂದ, ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ರಾಷ್ಟ್ರಧ್ವಜದ ಬಗ್ಗೆ  ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಅಂಬೇಡ್ಕರ ವೃತ್ತದಿಂದ ಕಾಲ್ನಡಿಗೆಯ ಮುಖಾಂತರ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಜು ಆಲಗೂರ, ಉಪಾಧ್ಯಕ್ಷ ವೈಜ್ಯನಾಥ ಕರ್ಫೂರಮಠ, ನಗರ ಬ್ಲಾಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಮೀರ ಭಕ್ಷಿ, ಜಲನಗರ ಬ್ಲಾಕ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಆರತಿ ಶಹಾಪೂರ, ಮಹಿಳಾ ಘಟಕದ ಅಧ್ಯಕ್ಷೆ ವಿಧ್ಯಾರಾಣಿ ತುಂಗಳ, ಶಿವಕಾಂತಮ್ಮ ನಾಯ್ಕ, ಕಾಂಗ್ರೆಸ್ ಮುಖಂಡರಾದ ಸೋಮನಾಥ ಕಳ್ಳಿಮನಿ, ಸೇವಾದಳದ ಘಟಕದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಕಾರ್ಯದರ್ಶಿ ವಸಂತ ಹೊನ್ಮೊಡೆ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.




Leave a Reply

Your email address will not be published. Required fields are marked *

error: Content is protected !!