ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕಾಂಗ್ರೆಸ್ ನಾಯಕರ ವಿರುದ್ಧ, ಮಠಾಧೀಶರ ವಿರುದ್ಧ ಹಾಗೂ ಬುದ್ದಿಜೀವಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತ್ನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನ ಬಂಧಿಸಿಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ನಗರದ ಬಿ.ಆರ್ ಅಂಬೇಡ್ಕರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು, ಪ್ರಚೋಧನಕಾರಿಯಾಗಿ ಮಾತ್ನಾಡಿರುವ ಯತ್ನಾಳ ವಿರುದ್ಧ ಜಿಲ್ಲಾಡಳಿತ ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಿ ಬಂಧಿಸಬೇಕು ಎಂದರು. ಈ ವೇಳೆ ಮಾತ್ನಾಡಿದ ಮುಖಂಡರು, ಗಾಂಧಿ ಕುಟುಂಬಕ್ಕೆ ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ನಿಮ್ಮ ಸರ್ಟಿಫಿಕೇಟ್ ಬೇಕಿಲ್ಲ. ನಿಮಗೆ ಬುದ್ದಿ ಭ್ರಮಣೆಯಾಗಿದೆ. ಮೊದಲು ಹುಚ್ಚಾಸ್ಪತ್ರೆ ಸೇರಿ ಉಪಚಾರ ಮಾಡಿಕೊಂಡರೆ ಒಳ್ಳೆಯದು ಎಂದರು.