ರಾಜ್ಯದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

149

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿ ಪಡಿಸುತ್ತಿರುವ ಹಿನ್ನಲೆಯಲ್ಲಿ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಸಜ್ಜಾಗಿದೆ. ರಾಜ್ಯದ ವಿವಿಧ ಕಡೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.

ಅಸ್ಸಾಂನಲ್ಲಿ ಪಾದಯಾತ್ರೆ ಮುಂದುವರೆದಿದೆ. ಆದರೆ ಅಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಸೋಮವಾರ ಶಂಕರ ದೇವ ಸತ್ರ ದೇವಸ್ಥಾನಕ್ಕೆ ಹೋದರೆ ಪ್ರವೇಶ ನಿರಾಕರಿಸಿ ಮಧ್ಯಾಹ್ನದ ನಂತರ ಬನ್ನಿ ಎಂದಿದ್ದಾರೆ. ಹೀಗಾಗಿ ಧರಣಿ ನಡೆಸಬೇಕಾಯಿತು. ಇದನ್ನೆಲ್ಲ ಖಂಡಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆ ಪ್ರತಿಭಟನೆ ನಡೆಸಲಿದೆ.




Leave a Reply

Your email address will not be published. Required fields are marked *

error: Content is protected !!