ಪ್ರಜಾಸ್ತ್ರ ಸುದ್ದಿ
ನವದೆಹಲಿ: ಅಗ್ನಿಪಥ್ ಯೋಜನೆಯ ಮೂಲಕ ಸೇನೆಗೆ ನಾಲ್ಕು ವರ್ಷಗಳ ಅಲ್ಪಾವಧಿಗೆ ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ. ಜೂನ್ 24ರಿಂದ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. 17.5 ರಿಂದ 23 ವರ್ಷದ ವಯೋಮಾನದವರಿಗೆ ಇದರಲ್ಲಿ ಅವಕಾಶವಿದೆ. ಇದನ್ನು ಖಂಡಿಸಿ ದೇಶದ ತುಂಬಾ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದಿವೆ.
ಇಂದು ಕಾಂಗ್ರೆಸ್ ದೆಹಲಿಯ ಜಂತರ್ ಮಂತರ್ ನಲ್ಲಿ ಸತ್ಯಾಗ್ರಹ ಪ್ರಾರಂಭವಿಸಿದೆ. ಅಗ್ನಿಪಥ್ ಯೋಜನೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಎಐಸಿಸಿ ನಾಯಕರು ಸತ್ಯಾಗ್ರಹ ಪ್ರಾರಂಭಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದಾರೆ.