ಪ್ರಜಾಸ್ತ್ರ ಸುದ್ದಿ
ಧಾರವಾಡ: ವಿದ್ಯಾಕಾಶಿಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ ವಿಜಯ ಸಾಧಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿ ಸಧ್ಯ ಜಾಮೀನು ಮೇಲೆ ಹೊರಗೆ ಇರುವ ವಿನಯ್ ಕುಲಕರ್ಣಿ ಜಿಲ್ಲೆಗೆ ಬರದೆ ಹೋದರೂ ಪಕ್ಷದ ಕಾರ್ಯಕರ್ತರ ಕೆಲಸದಿಂದ ಬಿಜೆಪಿಯ ಶಾಸಕ ಅಮೃತ್ ದೇಸಾಯಿ ವಿರುದ್ಧ ಭಾರೀ ಗೆಲುವು ಸಾಧಿಸಿದ್ದಾರೆ.