ಚಿತ್ತಾಪುರದಲ್ಲಿ ಕಾಂಗ್ರೆಸ್-ಬಿಜೆಪಿ ಜಟಾಪಟಿ

189

ಪ್ರಜಾಸ್ತ್ರ ಸುದ್ದಿ

ಚಿತ್ತಾಪುರ: ಕಲಬುರಗಿ ಜಿಲ್ಲೆಯ ಚಿತ್ತಾಪುರ ಪುಟ್ಟಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಟಾಪಟಿ ಶುರುವಾಗಿದೆ. ಶಾಸಕ ಪ್ರಿಯಾಂಕ್ ಕರ್ಗೆ ಕಾಣಿಯಾಗಿದ್ದಾರೆ ಎಂದು ಬಿಜೆಪಿ ಎಲ್ಲೆಡೆ ಪೋಸ್ಟರ್ ಅಂಟಿಸಿದೆ. ಈ ವಿಚಾರಕ್ಕೆ ಗಲಾಟೆ ಶುರುವಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಲಾಡ್ಜಿಂಗ್ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಅರವಿಂದ್ ಚವ್ಹಾಣ್ ಅವರನ್ನು ಬಂಧಿಸಬೇಕು. ಮೊದಲು ಅವರು ಬಿಜೆಪಿ ಟಿಕೆಟ್ ಪಡೆದು ಇಲ್ಲಿಗೆ ಬರಲಿ. ಬಿಜೆಪಿ ಸಂಸದ ಉಮೇಶ್ ಜಾಧವ್ ಇದುವರೆಗೂ ಚಿತ್ತಾಪುರಕ್ಕೆ ಬಂದಿಲ್ಲ. ಅವರು ಕಾಣೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿಪಿಐ ಪ್ರಕಾಶ್ ಯಾತನೂರ ಮಾತನಾಡಿ, ಇದರಲ್ಲಿ ಯಾರು ಯಾರು ಇದ್ದಾರೋ ಅವರೆಲ್ಲರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಡಲಾಯಿತು.




Leave a Reply

Your email address will not be published. Required fields are marked *

error: Content is protected !!