ಪ್ರಜಾಸ್ತ್ರ ಸುದ್ದಿ
ಚಳ್ಳಕೆರೆ: ಸಿದ್ದರಾಮಯ್ಯನವರು ಬರೀ ನಮ್ಮ ಪಕ್ಷದ ನಾಯಕರಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಹಕ್ಕಿನಲ್ಲಿ ವಿರೋಧ ಪಕ್ಷದ ಸ್ಥಾನ ನೀಡಲಾಗಿದೆ. ಸರ್ಕಾರ ತಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ. ಇಲ್ಲದಿದ್ದರೆ ಸಿಎಂ, ಮಂತ್ರಿಗಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಬೇಕಾಗುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.
ಸರ್ಕಾರ ಮಾಡಿದ ಅನೇಕ ತಪ್ಪುಗಳನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರೆ ತಮಗೆ ಅನ್ಯಾಯವಾಗಿದೆ ಎಂದು ಪ್ರತಿಭಟಿಸಿದ್ದಾರೆ. ಹೀಗಾಗಿ ಪ್ರತಿಪಕ್ಷವಾಗಿ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಜವಾಬ್ದಾರಿ ಇದೆ. ಅದನ್ನು ಮಾಡಲು ಮುಂದಾದರೆ, ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಹೊಡೆಯುತ್ತಿದ್ದಾರೆ. ಇದರಿಂದ ಸಿದ್ದರಾಮಯ್ಯನವರನ್ನು, ಕಾಂಗ್ರೆಸ್ ನವರನ್ನು ಹೆದರಿಸಲು ಸಾಧ್ಯವಿಲ್ಲ ಎಂದರು.ನ
ನಿಮ್ಮ ಲಂಚತನ, ಶೇಕಡ 40ರಷ್ಟು ಕಮಿಷನ್ ವಿರೋಧಿಸಿ ನಾನು ಅಧಿಕೃತವಾಗಿ ಪ್ರತಿಭಟನೆ ನಡೆಸಲು ಕರೆ ಕೊಟ್ಟರೆ ಮಂತ್ರಿಗಳ ಕಾರ್ಯಕ್ರಮಗಳು ಏನಾಗಬಹುದು, ಕಾನೂನು ಸುವ್ಯವಸ್ಥೆ ಏನಾಗಬಹುದು ಎಂದು ಯೋಚಿಸಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನು ತಡೆಯದೆ ಹೋದರೆ ನಮ್ಮ ನಾಯಕರೊಂದಿಗೆ ಚರ್ಚಿಸಿ ಮುಂದಿನ ಹೋರಾಟದ ಹೆಜ್ಜೆ ಇಡಬೇಕಾಗುತ್ತೆ ಎಂದರು.