ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ಅಲಿಯಾಸ್ ಮತ್ತಿ ರವಿ(42) ಕೊಲೆಯ ಯುವಕ. ಚೌಡೇಶ್ವರಿ ನಗರದ ಹಳ್ಳಿ ರುಚಿ ಹತ್ತಿರ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಹಂತಕರು, ಏರಿಯಾಗಳಲ್ಲಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ್ದಾರೆ. ನಂತರ ಬಾರ್ ವೊಂದರಿಂದ ರವಿಯನ್ನು ಅಟ್ಟಾಡಿಸಿಕೊಂಡು ಬಂದಿದ್ದಾರೆ. ನಂತರ ಹಳ್ಳಿ ರುಚಿ ಕ್ರಾಸ್ ಹತ್ತಿರ ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆ ಮಾಡಿದ್ದಾರೆ.