ಪ್ರಜಾಸ್ತ್ರ ಸುದ್ದಿ
ಸಿಂದಗಿ: ಸಂವಿಧಾನ ದಿನಾಚರಣೆ ಪ್ರಯುಕ್ತ ಸರ್ಕಾರದಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಇದರ ಪೂರ್ವಭಾವಿ ಸಭೆಯನ್ನು ತಹಶೀಲ್ದಾರ್ ಪ್ರದೀಪಕುಮಾರ್ ಹಿರೇಮಠ ನೇತೃತ್ವದಲ್ಲಿ ತಾಲೂಕು ಆಡಳಿತ ಕಚೇರಿಯಲ್ಲಿ ಬುಧವಾರ ನಡೆಸಲಾಯಿತು. ಫೆಬ್ರವರಿ 11 ರಿಂದ 14ರ ತನಕ ತಾಲೂಕಿನ 16 ಗ್ರಾಮ ಪಂಚಾಯ್ತಿ ವ್ಯಾಪ್ತಿ, ಪುರಸಭೆ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ಫೆಬ್ರವರಿ 14ರ ಸಂಜೆ 8 ಗಂಟೆಗೆ ಬೀಳ್ಕೊಡುಗೆ ಸಮಾರಂಭ ನಡೆಯಲಿದೆ ಎಂದು ತಿಳಿಸಲಾಗಿದೆ.
ಸಿಡಿಪಿಒ ಶಂಭುಲಿಂಗ ಹಿರೇಮಠ, ಕೃಷಿ ಇಲಾಖೆಯ ಸಹಾಯ ನಿರ್ದೇಶಕ ಹೆಚ್.ವೈ ಸಿಂಗೆಗೋಳ, ಆರ್ಎಫ್ಓ ರಾಜೀವ ಬಿರಾದಾರ, ಬಿಎಸ್ಎಂ ಕಚೇರಿಯ ಸಹಾಯಕ ನಿರ್ದೇಶಕ ರವೀಂದ್ರ ಬಂಥನಾಳ, ಪುರಸಭೆ ಮುಖ್ಯಾಧಿಕಾರಿ ಚೌಕಿಮಠ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ, ಗ್ರಾಮ ಪಂಚಾಯ್ತಿಯನ್ನು ಹಂಚಿಕೆ ಮಾಡಲಾಗಿದೆ.
ಈ ವೇಳೆ ವಿವಿಧ ಸಂಘಟನೆಯ ಮುಖಂಡರು, ರಾಜಕೀಯ ಮುಖಂಡರು, ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.