ಬೆಂಗಳೂರು: ಕಂಟೇನ್ಮೆಂಟ್ ಪ್ರದೇಶಗಳನ್ನ ಹೊರತು ಪಡಿಸಿ, ಉಳಿದ ಕಡೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನ ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂದು ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದ್ರು.
ಕೇಂದ್ರದ ಮಾರ್ಗಸೂಚಿ ಅನ್ವಯ ಆರ್ಥಿಕ ಚಟುವಟಿಕೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಇದ್ರಿಂದಾಗಿ ಕಾರ್ಮಿಕರಿಗೆ ಉದ್ಯೋಗ ದೊರೆಯಲಿದೆ ಎಂದು ಸೂಚಿಸಿದ್ರು. ಇನ್ನು ಹೊರ ರಾಜ್ಯಗಳ ಕಾರ್ಮಿಕರನ್ನ ಅವರ ರಾಜ್ಯಗಳಿಗೆ ಕಳುಹಿಸುವ ಕುರಿತು ಚರ್ಚಿಸಲಾಯ್ತು. ಒಡಿಶಾ ಸಿಎಂ ನವೀನ ಪಟ್ನಾಯಕ್ ಜೊತೆ ಮಾತ್ನಾಡಿ ಅವರ ರಾಜ್ಯದ ಕಾರ್ಮಿಕರನ್ನ ಸುರಕ್ಷಿತವಾಗಿ ಕಳುಹಿಸುವ ಕುರಿತು ಚರ್ಚೆ ನಡೆಸಿದ್ರು.
ಬೆಂಗಳೂರು ನಗರ, ಗ್ರಾಮಾಂತರ, ತುಮಕರೂರು, ಮೈಸೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ರು. ಈ ವೇಳೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ ಭಾಸ್ಕರ, ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿ ಅನೇಕರು ಸಭೆಯಲ್ಲಿ ಭಾಗವಹಿಸಿದ್ರು.