ಗುಮ್ಮಟನಗರಿಯಾದ್ಯಂತ ಬೆಳ್ಳಂಬೆಳಗ್ಗೆ ಮಳೆ

141

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗುಮ್ಮಟನಗರಿ ವಿಜಯಪುರ ಜಿಲ್ಲೆಯ ಬಹುತೇಕ ಭಾಗಗಲ್ಲಿ ಬುಧವಾರ ಮುಂಜಾನೆ ಮಳೆ ಕಾಣಿಸಿಕೊಂಡಿದೆ. ನಸುಕಿನ ಜಾವದಿಂದಲೇ ಮಳೆ ಸುರಿಯಲು ಪ್ರಾರಂಭಿಸಿದೆ. ಈ ಮೂಲಕ ವಾಯುಭಾರ ಕುಸಿತದ ಪರಿಣಾಮ ಜೋರಾಗಿದೆ.

ಮಂಗಳವಾರ ಮಧ್ಯಾಹ್ನ ವಿವಿಧ ತಾಲೂಕಿನಲ್ಲಿ ಸಾಧಾರಣ ಮಳೆಯಾದರೆ, ಜಿಲ್ಲಾ ಕೇಂದ್ರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಅದು ಬುಧವಾರಕ್ಕೂ ಮುಂದುವರೆದಿದ್ದು, ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ಇಂಡಿ, ಮುದ್ದೇಬಿಹಾಳ, ಬಸವನ ಬಾಗೇವಾಡಿ, ಕೊಲ್ಹಾರ ಸೇರಿ ಹಲವು ಕಡೆ ಮಳೆಯಾಗಿದೆ.




Leave a Reply

Your email address will not be published. Required fields are marked *

error: Content is protected !!