ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಬಿಬಿಎಂಪಿ ಗುತ್ತಿಗೆದಾರರು ಕಮಿಷನ್ ಆರೋಪ ಮಾಡಿದ್ದಾರೆ. ಹಣ ಕೇಳಿಲ್ಲಂದ್ರೆ ಅಜ್ಜಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದಿರುವುದು ವೈರಲ್ ಆಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ, ನನಗೆ ಯಾವ ಬಿಲ್ ವಿಚಾರವೂ ಗೊತ್ತಿಲ್ಲ. ಯಾವ ಗುತ್ತಿಗೆದಾರನಿಗೂ ಉತ್ತರ ಕೊಡಲ್ಲ. ರಾಜಕಾರಣ ನನಗೂ ಗೊತ್ತಿದೆ. ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಅನ್ನೋದು ನನಗೆ ಗೊತ್ತು. ಈ ಬ್ಲ್ಯಾಕ್ ಮೇಲ್ ನಡೆಯಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.
ಯಾರಿಗೋ ಬ್ಲ್ಯಾಕ್ ಮೇಲ್ ಮಾಡಿದಂತೆ ನನಗೆ ಮಾಡಲು ಬರಬೇಡಿ. ನನಗೆ ಬೆದರಿಕೆ ಹಾಕಿದರೆ ಕೇಳ್ತೀನಾ ಎಂದು ಎಚ್ಚರಿಕೆ ಶೈಲಿಯಲ್ಲಿ ಮಾತನಾಡಿದ್ದಾರೆ. ಬಿಜೆಪಿ ವಿರುದ್ಧ ನಾವು ಆರೋಪ ಮಾಡಿದ್ದು ಸತ್ಯ, ತನಿಖೆ ಮಾಡಿ ಎಂದು ಪತ್ರ ಕೊಟ್ಟಿದ್ದು ಸತ್ಯ. ತಪ್ಪು ಇಲ್ಲದವರು ಯಾಕೆ ವಿರೋಧಿಸಬೇಕು ಅಂತಾ ಕಿಡಿ ಕಾರಿದರು.