ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಎಂಇಎಸ್ ಪುಂಡರ ಮತ್ತೆ ತಮ್ಮ ಕ್ಯಾತೆಯನ್ನು ತೆಗೆದಿದ್ದಾರೆ. ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.
ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಗ್ರಾಫಿಕ್ ಎಡಿಟ್ ಮಾಡಿ, ಎಂಇಎಸ್ ಮುಖಂಡ ಶುಭಂ ಶಳಕೆ ಎಂಬಾತ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದಕ್ಕೆ ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಎಂದು ಶೀರ್ಷಿಕೆ ಕೊಟ್ಟಿದ್ದಾನೆ.