ಬೆಂಗಳೂರು: ಕರೋನಾ ಮಹಾಮಾರಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಸಮುದಾಯವನ್ನ ಗುರಿಯಾಗಿಸಿಕೊಂಡು ಗುಂಡಿಕ್ಕಿಯೆಂದ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಿ. ಅವರನ್ನ ಬಂಧಿಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಹೊನ್ನಳ್ಳಿ ಕ್ಷೇತ್ರದ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮ ತೆಗೆದುಕೊಳ್ಳಿ. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಶಾಸನ ಸಭೆಗೆ ಬಂದಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಗುಂಡಿಕ್ಕಿ ಕೊಲ್ಲಿ ಎಂದವರನ್ನ ಕ್ರಿಮಿನಲ್ ಅಪರಾಧದಡಿ ಕೂಡಲೇ ಬಂಧಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇನ್ನು ಲಾಕ್ ಡೌನ್ ಏಪ್ರಿಲ್ 14ಕ್ಕೆ ಮುಗಿಯುವ ನಿರೀಕ್ಷೆಯಿದೆ. ಒಂದು ವೇಳೆ ವಾರ, ಹತ್ತು ದಿನ ಮುಂದೆ ಹೋದ್ರೆ ಜನರು ಸಹಕರಿಸಬೇಕು. ವಿಪಕ್ಷವಾಗಿ ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.