ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನ ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವನ್ನ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ಎಸ್.ಕೆ ಕೌಲ್ ಹಾಗೂ ಕೆ.ಎಂ ಜೋಸೆಫ್ ನೇತೃತ್ವದ ದ್ವಿಸದಸ್ಯಪೀಠ, ಪೌರತ್ವ ತಿದ್ದುಪಡಿ ಕಾಯ್ದೆ ಪರ ವಿರೋಧ ಪ್ರತಿಭಟನೆಯಲ್ಲಿ ಹಿಂಸೆಗೆ ದಾರಿ ಮಾಡಿಕೊಟ್ಟಿದೆ. ಸಿಎಎ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ರಿಗೆ ಸೂಚಿಸಲಾಗಿದೆ.
ದೆಹಲಿಯಲ್ಲಿ ನಡೆದ ಹಿಂಸಾಚಾರ ಹೈಕೋರ್ಟ್ ವ್ಯಾಪ್ತಿಗೆ ಬರುತ್ತೆ. ಅಲ್ಲಿಯೇ ವಿಚಾರಣೆ ನಡೆಸಲಿದೆ. ಇದರಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲವೆಂದು ತಿಳಿಸಿದೆ. ಈಗಾಗ್ಲೇ ಹಿಂಸಾಚಾರದಿಂದ 22 ಮಂದಿ ಪ್ರಾಣ ಕಳೆದುಕೊಂಡಿದ್ದು, 190ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.