ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮತಗಳನ್ನು ಕ್ರೋಡೀಕರಣ ಮಾಡುವ ಸಲುವಾಗಿ ರಾಜ್ಯ ಬಿಜೆಪಿ ಸರ್ಕಾರ ಒಂದಾದ ಮೇಲೆ ಒಂದು ವಿವಾದ ಮಾಡುತ್ತಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್, ಕಾಶ್ಮೀರ್ ಫೈಲ್ಸ್, ಜಾತ್ರೆಯಲ್ಲಿ ನಿರ್ಬಂಧ, ಹಲಾಲ್, ಆಜಾನ್ ಎಂದುಕೊಂಡು ಒಂದಾದ ಮೇಲೆ ಒಂದು ವಿವಾದ ಮಾಡುತ್ತಿದೆ. ಇದರ ಕೆಟ್ಟ ಪರಿಣಾಮ ರಾಜ್ಯದ ಮೇಲಾಗುತ್ತಿದೆ. ಕೈಗಾರಿಕಾ ಉದ್ಯಮಿಗಳು ಇಲ್ಲಿಗೆ ಬರಲು ಹಿಂಜರಿಯುತ್ತಿದ್ದಾರೆ ಅಂತಾ ಆಕ್ರೋಶ ಹೊರ ಹಾಕಿದರು.