ಮತಾಂತರ ಕಾಯ್ದೆ ನಿಷೇಧ ಬಗ್ಗೆ ಇಂದು ನಿರ್ಧಾರ?

210

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರುವ ಕುರಿತು ಚರ್ಚೆ ನಡೆಯಲಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಸದನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ.

ಅಧಿವೇಶನದಲ್ಲಿ ವಿಷಯ ಮಂಡಿಸಿ ಒಪ್ಪಿಗೆ ಪಡೆಯಬೇಕಿರುವುದರಿಂದ ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಯಾಕಂದರೆ, ಮತಾಂತರ ಕಾಯ್ದೆ ನಿಷೇಧಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿಕೊಂಡು ಬರುತ್ತಿದೆ. ಹೀಗಾಗಿ ಸದನದಲ್ಲಿ ಒಪ್ಪಿಗೆ ನೀಡುವುದು ಸುಳ್ಳು. ಇದರ ಜೊತೆಗೆ ಮೇಲ್ಮನೆಯಲ್ಲಿ ಬಿಜೆಪಿ ಸಂಖ್ಯಾಬಲ ಕಡಿಮೆಯಿದೆ. ಈ ಕಾರಣಕ್ಕೆ ಈ ವಿಚಾರ ಏನಾಗುತ್ತೆ ಅನ್ನೋದು ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!