ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸುತ್ತೇವೆ ಎಂದರು.
ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿತ್ತು. ವಿಧಾನಪರಿಷತ್ ನಲ್ಲಿ ಅಂಗೀಕಾರ ಆಗಿರಲಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗುವುದು ಅಂತಾ ತಿಳಿಸಿದರು.