ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸುಗೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.
ಈಗಾಗ್ಲೇ ಸಶಕ್ತವಾದ ಕಾನೂನು ಇರುವಾಗ ಈ ಹೊಸ ಕಾಯ್ದೆ ಯಾಕೆ? ಅಲ್ಪಸಂಖ್ಯಾತರನ್ನು ಬೆದರಿಸುವ, ಕಿರುಕುಳ ನೀಡುವ ದುರುದ್ದೇಶವಲ್ಲದೆ ಮತ್ತೇನಿದೆ ಎಂದು ಪ್ರಶ್ನಿಸಿದ್ದಾರೆ. ಸುಗೀವಾಜ್ಞೆಯನ್ನು ತಿರಸ್ಕರಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ದುರಾಡಳಿತ ಭ್ರಷ್ಟಾಚಾರದಿಂದ ನಿತ್ಯ ಬೆತ್ತಲೆಯಾಗುತ್ತಿರುವ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು, ಧಾರ್ಮಿಕ ಭಾವನೆ ಕೆರಳಿಸಲು ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.