ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಮತಾಂತರ ನಿಷೇಧ ವಿಧೇಯಕವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಿದು ಹಾಕಿದ್ದಾರೆ. ಇದಕ್ಕೆ ಅವರು ಕ್ಷಮೆ ಕೇಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು. ಡಿ.ಕೆ ಶಿವಕುಮಾರ್ ಯಾವ ರೀತಿ ಬಿಲ್ ಹರಿದು ಬೀಸಾಕಿದರೋ ಅದೆ ರೀತಿ ಜನರು ಕಾಂಗ್ರೆಸ್ ಪಕ್ಷವನ್ನು ಹರಿದು ಬೀಸಾಕುತ್ತಾರೆ ಎಂದು ಕಿಡಿ ಕಾರಿದರು.