ಆರೋಗ್ಯ ಇಲಾಖೆಯಿಂದ ಜಾಗೃತಿ

429

ದೇವರಹಿಪ್ಪರಗಿ: ತಾಲೂಕಿನ ಸಮೀಪದ ಪಡಗಾನೂರ ಗ್ರಾಮದಲ್ಲಿ ದೇವರಹಿಪ್ಪರಗಿಯ ಆರೋಗ್ಯ ಇಲಾಖೆ ವತಿಯಿಂದ ಕರೋನಾ ರೋಗದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಹಿರಿಯ ಆರೋಗ್ಯ ಸಹಾಯಕ ಬಿ.ಎಸ್.ಡಿಗ್ಗಿ, ಸರ್ಕಾರ ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ಇಡೀ ರಾಜ್ಯವನ್ನ ಲಾಕ್ ಡೌನ್ ಗೆ ಕರೆ ನೀಡಿದೆ. ಯಾರೂ ಮನೆಯಿಂದ ಅನಾವಶ್ಯಕವಾಗಿ ಹೊರಗೆ ಬರದಿರಿ. ಮನೆಯಲ್ಲಿಯೇ ಇದ್ದು ಆರೋಗ್ಯ ಕಾಪಾಡಿಕೊಳ್ಳಿಯೆಂದು ಸಲಹೆ ನೀಡಿದ್ದಾರೆ.

ಈ ವೇಳೆ ದೇವರಹಿಪ್ಪರಗಿ ಆಸ್ಪತ್ರೆಯ ಸಿಬ್ಬಂದಿ ಎಸ್.ಎಸ್. ಯಡಹಳ್ಳಿ, ಅಂಕಿತ ನ್ಯಾಮಾಗೊಂಡ, ಡಿ. ಡಿ. ಪಾಟೀಲ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!