271 ಜನರಲ್ಲಿ ಸೋಂಕು.. 464 ಜನ ಗುಣಮುಖ

346

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಹೆಲ್ತ್ ಬುಲೆಟಿನ್ ಬಂದಿದ್ದು, ಇಂದು 271 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ 6,516ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇನ್ನು ಇಂದು 464 ಜನ ಗುಣಮುಖರಾಗಿರುವುದು ಖುಷಿಯ ಸಂಗತಿ.

ಇದುವರೆಗೂ 3,440 ಜನರು ಗುಣಮುಖರಾಗಿದ್ದಾರೆ. ಆದ್ರೆ, ಒಂದೇ ದಿನದಲ್ಲಿ 7 ಜನರು ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇದ್ರಿಂದಾಗಿ ಸಾವಿನ ಸಂಖ್ಯೆ 79ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಇಂದಿನ ಸೋಂಕಿತರ ಅಂಕಿಸಂಖ್ಯೆ ನೋಡುವುದಾದ್ರೆ..

ಬಳ್ಳಾರಿ 97, ಬೆಂಗಳೂರು ನಗರ 36, ಉಡುಪಿ 22, ಕಲಬುರಗಿ 20, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ 10, ಹಾಸನ 9, ಮೈಸೂರು 9, ತುಮಕೂರು 7, ಶಿವಮೊಗ್ಗ 6, ರಾಯಚೂರು 4, ಉತ್ತರ ಕನ್ನಡ 4, ಚಿತ್ರದುರ್ಗ, 3, ರಾಮನಗರ 3, ಮಂಡ್ಯ 2, ಬೆಳಗಾವಿ 1, ವಿಜಯಪುರ 1 ಹಾಗೂ ಕೋಲಾರದಲ್ಲಿ 1 ಸೋಂಕು ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗುಣಮುಖರ ಸಂಖ್ಯೆ ಏರಿಕೆಯಾಗ್ತಿರುವುದು ಖುಷಿಯ ಸಂಗಿತಿಯಾಗಿದೆ. ಇಂದು ಒಂದೇ ದಿನದಲ್ಲಿ 464 ಜನ ಡಿಸ್ಚಾರ್ಜ್ ಆಗಿದ್ದು, ಒಂದಿಷ್ಟು ನೆಮ್ಮದಿ ತಂದಿದೆ. ಇನ್ನು 2,995 ಪ್ರಕರಣಗಳು ಸಕ್ರಿಯವಾಗಿವೆ.




Leave a Reply

Your email address will not be published. Required fields are marked *

error: Content is protected !!